Home Bibles ಯೋಹಾನ 6:63 · ಕನ್ನಡ ಬೈಬಲ್
ಯೋಹಾನ 6:63 · ಕನ್ನಡ ಬೈಬಲ್

ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.

Cross references

ಆದಿಕಾಂಡ 2:7

ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.

ದ್ವಿತೀಯೋಪದೇಶಕಾಂಡ 32:47

ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.

ಕೀರ್ತನೆಗಳು 19:7

ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಕೀರ್ತನೆಗಳು 119:50

ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.

ಕೀರ್ತನೆಗಳು 119:93

ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.

ಕೀರ್ತನೆಗಳು 119:130

ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.

ಯೋಹಾನ 6:68

ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.

ಯೋಹಾನ 12:49

ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

ರೋಮಾಪುರದವರಿಗೆ 2:25

ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.

ರೋಮಾಪುರದವರಿಗೆ 3:1

ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

ರೋಮಾಪುರದವರಿಗೆ 8:2

ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.

ರೋಮಾಪುರದವರಿಗೆ 10:8

ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ರೋಮಾಪುರದವರಿಗೆ 10:17

ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

1 ಕೊರಿಂಥದವರಿಗೆ 2:9

ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.

1 ಕೊರಿಂಥದವರಿಗೆ 11:27

ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.

1 ಕೊರಿಂಥದವರಿಗೆ 15:45

ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

2 ಕೊರಿಂಥದವರಿಗೆ 3:6

ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.

ಗಲಾತ್ಯದವರಿಗೆ 5:6

ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಗಲಾತ್ಯದವರಿಗೆ 5:25

ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.

ಗಲಾತ್ಯದವರಿಗೆ 6:15

ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.

1 ತೆಸಲೋನಿಕದವರಿಗೆ 2:13

ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.

1 ತಿಮೋಥೆಯ 4:8

ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಹೆಬ್ರಿಯರಿಗೆ 13:9

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

ಯಾಕೋಬ 1:18

ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.

1 ಪೇತ್ರ 1:23

ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

1 ಪೇತ್ರ 3:18

ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

1 ಪೇತ್ರ 3:21

ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

Interlinear

Choose Theme