ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
Cross references
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.