ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
Cross references
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.