ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
Cross references
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ