ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
Cross references
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು