ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
Cross references
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.