ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
Cross references
ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.