(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
Cross references
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.