ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
Cross references
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.