ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
Cross references
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.