ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
Cross references
ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.