ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
Cross references
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.