ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
Cross references
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.