ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
Cross references
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.