ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
Cross references
ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.