ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
Cross references
ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.