ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
Cross references
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.