ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
Cross references
ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.