ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
Cross references
ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.