ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
Cross references
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.