Home Bibles ಯೋಹಾನ 9:7 · ಕನ್ನಡ ಬೈಬಲ್
ಯೋಹಾನ 9:7 · ಕನ್ನಡ ಬೈಬಲ್

ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

Cross references

ನಿರ್ಗಮಕಾಂಡ 4:11

ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?

2 ಅರಸುಗಳು 5:10

ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

ನೆಹೆಮ್ಯ 3:15

ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.

ಕೀರ್ತನೆಗಳು 146:8

ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

ಯೆಶಾಯ 8:6

ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ

ಯೆಶಾಯ 29:18

ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

ಯೆಶಾಯ 32:3

ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.

ಯೆಶಾಯ 35:5

ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಯೆಶಾಯ 42:7

ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಯೆಶಾಯ 42:16

ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.

ಯೆಶಾಯ 43:8

ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

ಲೂಕ 2:32

ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.

ಲೂಕ 13:4

ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

ಯೋಹಾನ 9:11

ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.

ಯೋಹಾನ 9:39

ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

ಯೋಹಾನ 10:36

ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?

ಯೋಹಾನ 11:37

ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.

ಅಪೋಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ಗಲಾತ್ಯದವರಿಗೆ 4:4

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

Interlinear

Choose Theme