ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
Cross references
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.