ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
Cross references
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.