ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
Cross references
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.