ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
Cross references
ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.