ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
Cross references
ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.