ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Cross references
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.