ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
Cross references
ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.