ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
Cross references
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.