Home Bibles ಯೋನ 3:6 · ಕನ್ನಡ ಬೈಬಲ್
ಯೋನ 3:6 · ಕನ್ನಡ ಬೈಬಲ್

ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.

Cross references

1 ಅರಸುಗಳು 21:27

ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.

ಎಸ್ತೇರ್ 4:1

ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.

ಎಸ್ತೇರ್ 4:3

ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.

ಯೋಬ 2:8

ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.

ಯೋಬ 42:6

ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.

ಕೀರ್ತನೆಗಳು 2:10

ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.

ಯೆರೆಮಿಯ 6:26

ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.

ಯೆರೆಮಿಯ 13:18

ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.

ಯೆರೆಮಿಯ 36:13

ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.

ವಿಲಾಪಗಳು 3:29

ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.

ಯೆಹೆಜ್ಕೇಲ 27:30

ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;

ದಾನಿಯೇಲ 9:3

ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.

ಮೀಕ 1:10

ಗತ್‌ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.

ಮತ್ತಾಯ 11:21

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಲೂಕ 10:13

ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

ಯಾಕೋಬ 1:9

ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

ಯಾಕೋಬ 4:6

ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

Interlinear

Choose Theme