ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
Cross references
ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.