ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
Cross references
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು