ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
Cross references
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
ಮೂರು ದಿವಸಗಳಾದ ಮೇಲೆ ಅಧಿಕಾರಿ ಗಳು ದಂಡಿನೊಳಗೆ ಹಾದು ಹೋಗಿ
ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.