ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
Cross references
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.