ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
Cross references
ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.