Home Bibles ಯೆಹೋಶುವ 10:26 · ಕನ್ನಡ ಬೈಬಲ್
ಯೆಹೋಶುವ 10:26 · ಕನ್ನಡ ಬೈಬಲ್

ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.

Cross references

ಅಂಕೆಗಳ ಪುಸ್ತಕ 25:4

ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.

ದ್ವಿತೀಯೋಪದೇಶಕಾಂಡ 21:22

ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ದ್ವಿತೀಯೋಪದೇಶಕಾಂಡ 21:23

ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಯೆಹೋಶುವ 8:29

ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.

ನ್ಯಾಯಾಧಿಪತಿಗಳು 8:21

ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.

1 ಸಮುವೇಲ 15:33

ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.

2 ಸಮುವೇಲ 21:6

ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.

2 ಸಮುವೇಲ 21:9

ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

ಎಸ್ತೇರ್ 2:23

ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.

ಎಸ್ತೇರ್ 7:9

ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಕೀರ್ತನೆಗಳು 18:41

ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.

ಕೀರ್ತನೆಗಳು 149:7

ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

Interlinear

Choose Theme