ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
Cross references
ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.