ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
Cross references
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು;
ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
ತಪ್ವೂಹ, ಏನಾಮ್ ಯರ್ಮೂತ್,
ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
ಜೀಫ್ ಅದೋರೈಮ್ ಲಾಕೀಷ್ ಅಜೇಕ
ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.