Home Bibles ಯೆಹೋಶುವ 2:11 · ಕನ್ನಡ ಬೈಬಲ್
ಯೆಹೋಶುವ 2:11 · ಕನ್ನಡ ಬೈಬಲ್

ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.

Cross references

ನಿರ್ಗಮಕಾಂಡ 15:14

ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.

ನಿರ್ಗಮಕಾಂಡ 15:15

ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

ದ್ವಿತೀಯೋಪದೇಶಕಾಂಡ 1:28

ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.

ದ್ವಿತೀಯೋಪದೇಶಕಾಂಡ 4:39

ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.

ದ್ವಿತೀಯೋಪದೇಶಕಾಂಡ 20:8

ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

ಯೆಹೋಶುವ 2:24

ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.

ಯೆಹೋಶುವ 5:1

ಇದಾದ ಮೇಲೆ ಇಸ್ರಾಯೇಲ್‌ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.

ಯೆಹೋಶುವ 7:5

ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.

ಯೆಹೋಶುವ 9:24

ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ಯೆಹೋಶುವ 14:8

ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.

1 ಅರಸುಗಳು 8:60

ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.

ನೆಹೆಮ್ಯ 6:16

ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.

ಎಸ್ತೇರ್ 8:17

ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಕೀರ್ತನೆಗಳು 22:14

ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.

ಕೀರ್ತನೆಗಳು 83:18

ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.

ಕೀರ್ತನೆಗಳು 102:15

ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.

ಯೆಶಾಯ 13:7

ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.

ಯೆರೆಮಿಯ 16:19

ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು

ದಾನಿಯೇಲ 4:34

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ದಾನಿಯೇಲ 6:25

ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.

ನಹೂಮ 2:10

ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.

ಜೆಕರ್ಯ 8:20

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಪ್ರಕಟನೆ 6:16

ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.

Interlinear

Choose Theme