ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
Cross references
ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ