ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
Cross references
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--