ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Cross references
ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.