ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
Cross references
ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.