ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
Cross references
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.