ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
Cross references
ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.