ಆ ಮಾತು ಇಸ್ರಾ ಯೇಲ್ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Cross references
ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ