ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.