ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
Cross references
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.