ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
Cross references
ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.
ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.