ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
Cross references
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.